Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

abhi
1 Min Read

 

 

 

ಬೆಂಗಳೂರು, ನ.1: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯದ ಹಲವು ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು

ಈ ಸಂದರ್ಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

The post ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ first appeared on karavalinews.com.

Share This Article
Leave a Comment